ಕರ್ನಾಟಕವನ್ನು ಆಳಿದ ರಾಜಮನೆತನಗಳು..

❇️Notes for PC/PSI exams 👮‍♂
ಕರ್ನಾಟಕವನ್ನು ಆಳಿದ  ರಾಜಮನೆತನಗಳು..

🟡 ಮೌರ್ಯರು 🔴

➤ ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ.

ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳ ಗಳಲ್ಲಿ ಕಂಡು ಬಂದಿವೆ.

➤ ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹು ವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳ ದಲ್ಲಿ ಬಂದು ನೆಲೆಸಿದ್ದನು.

➤ ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.

➤ ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :
➤  ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ.ರಾಮೇಶ್ವರ.
➤ ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ.
➤ ಗುಲ್ಬರ್ಗಾ ಜಿಲ್ಲೆಯ ಸನ್ನತಿ.

➤ ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದೇಗೊಳ್ಳಂ

🟡 ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225) 🔴

➤ ಮೌರ್ಯರ ಸಾಮಂತ ರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.

➤ ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.

➤ ಇವರ ಲಾಂಛನ : ವರುಣ.

➤ ಇವರೇ ಕ್ರಿ.ಶ 78 ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.

➤ ಶಾತವಾಹನರ ಮೂಲ ಪುರುಷ : ಸಿಮುಖ.

➤ ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ

➤ ಶಾತವಾಹನರನ್ನು ' ಶಾತಕರ್ಣಿಗಳೆಂದು' ಕರೆಯುತ್ತಾರೆ.

🟡 ಬನವಾಸಿಯ ಕದಂಬರು (ಕ್ರಿ.ಶ 345 - 540) 🔴

➤ ಈ ಸಂತತಿಯ ಸ್ಥಾಪಕ : ಮಯೂರವರ್ಮ (ಮಯೂರಶರ್ಮ) (345-360)

➤ ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)

➤ ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.

➤ ಇವರ ಲಾಂಛನ : ಸಿಂಹ.

➤ ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬ ರೆಂದು ಮೂರು ಶಾಖೆಗಳಿದ್ದವು.

➤ ಕದಂಬರ ಮೂಲದ ಬಗ್ಗೆ 'ಶಾಂತಿವರ್ಮನ ತಾಳಗುಂದ ಶಾಸನ' ತಿಳಿಸುತ್ತದೆ.

➤ ಕನ್ನಡದ ಪ್ರಪ್ರಥಮ ಶಾಸನ -  ಕಾಕುತ್ಸವರ್ಮನ ಹಲ್ಮಿಡಿ ಶಾಸನ.

🟡 ತಲಕಾಡಿನ ಗಂಗರು (ಕ್ರಿ.ಶ 350- 999) 🔴

➤ ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.

➤ ಈ ಸಂತತಿಯ ಮೊದಲ ದೊರೆ : ದಡಿಗ (350 -400)

➤ ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ

➤ ಇವರ ಎರಡನೆಯ ರಾಜಧಾನಿ : ತಲಕಾಡು

➤ ಇವರ ಮೂರನೇ ರಾಜಧಾನಿ : ಚೆನ್ನಪಟ್ಟಣ ಬಳಿಯ ಮಾಕುಂದ

➤ ಇವರ ಲಾಂಛನ : ಆನೆ(ಮದಗಜ)

➤ ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ದುರ್ವಿನೀತ (540-600)

➤ ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.

➤ ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.

🟡  ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757) 🔴

➤ ಈ ಸಂತತಿಯ ಸ್ಥಾಪಕ : ಜಯಸಿಂಹ

➤ ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಾಗಲಕೋಟೆ  ಜಿಲ್ಲೆಯಲ್ಲಿದೆ)

➤ ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ಇಮ್ಮಡಿ ಪುಲಕೇಶಿ (609-642)

➤ ಇವರ ರಾಜ ಲಾಂಛನ : ವರಹ.

➤ ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.

➤ ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು 'ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು ' ಎನ್ನುವರು.

🟡  ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540) 🔴

➤ ಈ ಸಂತತಿಯ ಸ್ಥಾಪಕ : ದಂತಿದುರ್ಗ

➤ ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡ ವಾಗಿತ್ತು.

➤ ಇವರ ಲಾಂಛನ : ಗರುಡ

➤ ಈ ಸಂತತಿಯ ಅತ್ಯಂತ ಹೆಸರಾಂತ ದೊರೆ : ಅಮೋಘವರ್ಷ ನೃಪತುಂಗ (814-878)

➤ ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.

🟡 ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200) 🔴 

➤  ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ

➤ ಇವರ ರಾಜಧಾನಿ : ಕಲ್ಯಾಣ

➤ ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)

➤ 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು.

🟡 ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183) 🔴

➤ ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿ ಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.

➤ ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳ ನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.

🟡 ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346) 🔴

➤ ಈ ಸಂತತಿಯ ಮೂಲ ಪುರುಷ : ಸಳ.

➤ ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.

➤ ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152)

➤ ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.

🟡 ವಿಜಯನಗರ ಸಾಮ್ರಾಜ್ಯ (ಕ್ರಿ.ಶ 1336 - 1565) 🔴

➤ ವಿದ್ಯಾರಣ್ಯ ರ ಸಹಾಯದಿಂದ ಹಕ್ಕ -ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.

➤ ಇವರ ರಾಜಧಾನಿ : ಹಂಪಿ

➤ ತುಳುವ ಸಂತತಿಯ ಕೃಷ್ಣದೇವರಾಯ (1519 - 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.

➤  1565 ರ ತಾಳೀಕೋಟೆ ಯುದ್ಧ ದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.

🟡 ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 - 1527) 🔴

➤ ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.

➤ ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು